ನವೆಂಬರ್ 16, 2020 ಸೋಮವಾರ [ಹಸಿರು]
ಸ್ಟಾಟ್ಲೆಂಡಿನ ಸಂತ ಮಾರ್ಗರೆಟ್ (ಐಚ್ಛಿಕ ಸ್ಮರಣೆ)
ಸಂತ ಜೆತ್ರೂದ್, ಕನ್ಯೆ (ಐಚ್ಛಿಕ ಸ್ಮರಣೆ)
ಮೊದಲ ವಾಚನ: ಯೊವಾನ್ನನ ಪ್ರಕಟನೆ 1.1-4; 2.1-5
ಕೀರ್ತನೆ 1:1-4, 6. ಶ್ಲೋಕ.ಯೊವಾನ್ನನ ಪ್ರಕಟನೆ 2:7
ಯಾರು ಜಯಹೊಂದುತ್ತಾನೋ ಅವನು ಸೌಭಾಗ್ಯ ಪಡೆಯುತ್ತಾನೆ
ಶುಭಸಂದೇಶ: ಲೂಕ 18.35-43
==================
ಮೊದಲನೇ ವಾಚನ
ಯೊವಾನ್ನನ ಪ್ರಕಟನೆ 1.1-4; 2.1-5
1 : ದೇವರು ಯೇಸುಕ್ರಿಸ್ತರಿಗಿತ್ತ ಪ್ರಕಟನೆ ಇದು. ಅತಿ ಶೀಘ್ರದಲ್ಲಿಯೇ ಸಂಭವಿಸಲಿರುವ ಘಟನೆಗಳನ್ನು ತಮ್ಮ ದಾಸರಿಗೆ ತಿಳಿಯಪಡಿಸುವುದಕ್ಕಾಗಿ ಕ್ರಿಸ್ತಯೇಸುವಿಗೆ ಈ ಪ್ರಕಟನೆಯನ್ನು ದೇವರು ದಯಪಾಲಿಸಿದರು. ಕ್ರಿಸ್ತಯೇಸು ತಮ್ಮ ದೂತನನ್ನು ಕಳುಹಿಸಿ ತಮ್ಮ ದಾಸನಾದ ಯೊವಾನ್ನನಿಗೆ ಇವುಗಳನ್ನು ಪ್ರಕಟಿಸಿದರು.
2 : ಯೊವಾನ್ನನು ದೇವರ ಸಂದೇಶಕ್ಕೂ ಕ್ರಿಸ್ತೇಸು ತಿಳಿಸಿದ ಸತ್ಯಕ್ಕೂ ಸಾಕ್ಷಾತ್ ಸಾಕ್ಷಿಯಾಗಿದ್ದಾನೆ.
3 : ಈ ಪ್ರವಾದನಾ ಸಂದೇಶವನ್ನು ಓದುವವನು ಧನ್ಯನು; ಓದಿದ್ದನ್ನು ಕೇಳಿಸಿಕೊಳ್ಳುವವರೂ ಧನ್ಯರು ಮತ್ತು ಈ ಪ್ರವಾದನೆಯಲ್ಲಿ ಲಿಖಿತವಾಗಿರುವುದನ್ನು ಕೈಗೊಂಡು ನಡೆಯುವವರು ಸಹ ಧನ್ಯರು! ಏಕೆಂದರೆ, ಕಾಲ ಸನ್ನಿಹಿತವಾಯಿತು. ಶ್ರೀಸಭೆಗಳಿಗೆ ಶುಭಾಶಯಗಳು
4 : ಏಷ್ಯಾಸೀಮೆಯಲ್ಲಿರುವ ಏಳು ಸಭೆಗಳಿಗೆ ಯೊವಾನ್ನನೆಂಬ ನಾನು ಬರೆಯುವುದೇನೆಂದರೆ: ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,’ ಭವಿಷ್ಯತ್ಕಾಲದಲ್ಲಿ ‘ಬರುವಾತನೂ’ ಆದ ದೇವರಿಂದ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ!
2:1 : “ಎಫೆಸದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದಿರುವಾತನೂ ಏಳು ಚಿನ್ನದ ದೀಪಸ್ತಂಭಗಳ ನಡುವೆ ನಡೆದಾಡುವಾತನೂ ನೀಡುವ ಸಂದೇಶವಿದು:
2 : ನಾನು ನಿನ್ನ ಸುಕೃತ್ಯಗಳನ್ನು ಬಲ್ಲೆ. ನಿನ್ನ ಶ್ರಮಜೀವನವನ್ನು ಅರಿತು ಇದ್ದೇನೆ. ನಿನ್ನ ಸಹನಾಶಕ್ತಿಯನ್ನು ಮನಗಂಡಿದ್ದೇನೆ. ದುರ್ಜನರನ್ನು ನೀನು ಸಹಿಸಲಾರೆ ಎಂಬುದು ನನಗೆ ಗೊತ್ತು. ಪ್ರೇಷಿತರಲ್ಲದಿದ್ದರೂ ಪ್ರೇಷಿತರೆಂದು ಹೇಳಿಕೊಳ್ಳುವವರನ್ನು ನೀನು ಪರಿಶೋಧಿಸಿರುವೆ. ಅವರು ಸುಳ್ಳುಗಾರರೆಂಬುದನ್ನು ಕಂಡುಹಿಡಿದಿರುವೆ.
3 : ಹೌದು, ಸಹನಾಶಕ್ತಿ ನಿನಗಿದೆ. ಬೇಸರಗೊಳ್ಳದೆ ನನ್ನ ಹೆಸರಿನ ನಿಮಿತ್ತ ನೀನು ಕಷ್ಟಸಂಕಟಗಳನ್ನು ತಾಳಿಕೊಂಡೆ.
4 : ಆದರೂ ನಿನ್ನ ಮೇಲೆ ಹೊರಿಸಬೇಕಾದ ಆಪಾದನೆ ಒಂದಿದೆ: ಮೊದಲು ನಿನಗೆ ನನ್ನ ಮೇಲಿದ್ದ ಪ್ರೀತಿ ಈಗಿಲ್ಲ.
5 : ಆದುದರಿಂದ ನೀನು ಹೇಗೆ ಪತನಹೊಂದಿದೆ ಎಂಬುದನ್ನು ಜ್ಞಾಪಿಸಿಕೋ. ಪಶ್ಚಾತ್ತಾಪಪಟ್ಟ ಪಾಪಕ್ಕೆ ವಿಮುಖನಾಗು. ನೀನು ಮೊದಲು ಮಾಡಿದ ಸುಕೃತ್ಯಗಳನ್ನು ಸಾಧಿಸು. ನೀನು ಪಾಪಕ್ಕೆ ವಿಮುಖನಾಗದೆ ಹೋದರೆ, ನಾನು ನಿನ್ನ ಬಳಿಗೆ ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದು ಹಾಕುತ್ತೇನೆ.
===================
ಕೀರ್ತನೆ
ಕೀರ್ತನೆ 1:1-4, 6. ಶ್ಲೋಕ.ಯೊವಾನ್ನನ ಪ್ರಕಟನೆ 2:7
ಶ್ಲೋಕ:ಯಾರು ಜಯಹೊಂದುತ್ತಾನೋ
ಅವನು ಸೌಭಾಗ್ಯ ಪಡೆಯುತ್ತಾನೆ||
1 : ದುರ್ಜನರ ಆಲೋಚನೆಯಂತೆ ನಡೆಯದೆ /
ಪಾಪಾತ್ಮರ ಪಥದಲಿ ಕಾಲೂರದೆ /
ಧರ್ಮನಿಂದಕರ ಕೂಟದಲಿ ಕೂರದೆ //
2 : ಪ್ರಭುವಿನ ಧರ್ಮಶಾಸ್ತ್ರದಲಿ
ಹರ್ಷಗೊಳ್ಳುವವನಾರೋ - ಅವನೇ ಧನ್ಯನು/
ಹಗಲಿರುಳೆನ್ನದೆ ಅದನೆ ಧ್ಯಾನಿಸು ತಿರುವವನಾರೋ
- ಅವನೇ ಧನ್ಯನು //
3 : ನದಿಯ ಬದಿಯಲೇ ಬೆಳೆದಿಹ ಮರದಂತೆ /
ಸಕಾಲಕೆ ಫಲವೀವ ವೃಕ್ಷದಂತೆ /
ಎಲೆಬಾಡದೆ ಪಸಿರಿರುವ ತರುವಂತೆ /
ಸಿಗುವುದು ಅವನ ಕಾರ್ಯಗಳಿಗೆ ಸಫಲತೆ //
4 : ದುರುಳರಾದರೊ ತೂರಿ ಹೋಗುವರು /
ಬಿರುಗಾಳಿಗೆ ತರಗೆಲೆಯಾಗುವರು //
6 : ಸಜ್ಜನರ ಮಾರ್ಗಕ್ಕಿದೆ ಪ್ರಭುವಿನ ಪಾಲನ /
ದುರ್ಜನರ ಮಾರ್ಗಕ್ಕಿದೆ ಸಂಪೂರ್ಣ ವಿನಾಶನ //
===================
ಶುಭಸಂದೇಶ
ಲೂಕ 18.35-43
35 : ಯೇಸುಸ್ವಾಮಿ ಜೆರಿಕೊ ಪಟ್ಟಣವನ್ನು ಸಮೀಪಿಸುತ್ತಿದ್ದಾಗ ಕುರುಡನೊಬ್ಬನು ದಾರಿಯ ಪಕ್ಕದಲ್ಲಿ ಕುಳಿತು ಭಿಕ್ಷೆ ಬೇಡುತ್ತಿದ್ದನು.
36 : ಜನಸಂದಣಿಯ ಶಬ್ದವನ್ನು ಆಲಿಸಿ, ಅದೇನೆಂದು ವಿಚಾರಿಸಿದನು.
37 : “ನಜರೇತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾರೆ,” ಎಂದು ಅವನಿಗೆ ತಿಳಿಸಲಾಯಿತು.
38 : ಕೂಡಲೇ ಅವನು, “ಯೇಸುವೇ, ದಾವೀದ ಕುಲಪುತ್ರರೇ, ನನಗೆ ದಯೆತೋರಿ,” ಎಂದು ಗಟ್ಟಿಯಾಗಿ ಕೂಗಿಕೊಂಡನು.
39 : ಮುಂದೆ ಹೋಗುತ್ತಿದ್ದವರು, “ಸುಮ್ಮನಿರು” ಎಂದು ಅವನನ್ನು ಗದರಿಸಿದರು. ಅವನಾದರೋ, “ದಾವೀದ ಕುಲಪುತ್ರರೇ, ನನಗೆ ದಯೆತೋರಿ” ಎಂದು ಮತ್ತಷ್ಟು ಗಟ್ಟಿಯಾಗಿ ಕೂಗಿಕೊಂಡನು.
40 : ಇದನ್ನು ಕೇಳಿ ಯೇಸು, ಅಲ್ಲೇ ನಿಂತು, ಅವನನ್ನು ತಮ್ಮ ಬಳಿಗೆ ಕರೆದುತರುವಂತೆ ಅಪ್ಪಣೆಮಾಡಿದರು.
41 : ಅವನು ಹತ್ತಿರಕ್ಕೆ ಬಂದಾಗ, “ನನ್ನಿಂದ ನಿನಗೇನಾಗಬೇಕು?” ಎಂದು ಕೇಳಲು ಅವನು, “ಸ್ವಾವಿೂ, ನನಗೆ ಕಣ್ಣು ಕಾಣುವಂತೆ ಮಾಡಿ,” ಎಂದು ಪ್ರಾರ್ಥಿಸಿದನು.
42 : ಯೇಸು ಅವನಿಗೆ, “ದೃಷ್ಟಿಯನ್ನು ಪಡೆ; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಮಾಡಿದೆ,” ಎಂದರು.
43 : ಆ ಕ್ಷಣವೇ ಅವನಿಗೆ ದೃಷ್ಟಿಬಂದಿತು. ದೇವರನ್ನು ಸ್ತುತಿಸುತ್ತಾ ಅವನೂ ಯೇಸುವನ್ನು ಹಿಂಬಾಲಿಸಿದನು. ಇದನ್ನು ನೋಡಿದ ಜನರೆಲ್ಲರೂ ದೇವರನ್ನು ಕೊಂಡಾಡಿದರು.
==================
ಚಿಂತನೆ
ಜೆರಿಕೊ ಪಟ್ಟಣದಲ್ಲಿ ಯೇಸು ಕುರುಡನಿಗೆ ದೃಷ್ಟಿದಾನ ಮಾಡುತ್ತಾರೆ. ಜೆರಿಕೊ ಎಂದರೆ `ಪರಿಮಳ’ ಎಂದರ್ಥ. ಈ ಕುರುಡನು ಯೇಸುವನ್ನು ದಾವೀದ ಕುಲಪುತ್ರರೇ ಎಂದು ಸಂಬೋದಿಸುತ್ತಾನೆ. ಈ ಬಿರುದು ರಕ್ಷಕನಿಕೆ ನೀಡಲಾಗಿದೆ. ರಕ್ಷಕನು ಬಂದು ನಮ್ಮನ್ನು ರೋಮನ್ನರ ಅಧೀನದಿಂದ ಬಿಡುಗಡೆ ಮಾಡುವನೆಂದು ಜನರು ನಂಬಿದ್ದರು. ಬಹುಶಃ ಯೇಸುವಿನ ಅದ್ಬುತಗಳ ಬಗ್ಗೆ ಆಲಿಸಿದ್ದ ಕುರುಡನು ಗಟ್ಟಿಯಾಗಿ ಯೇಸುವನ್ನು ಕೂಗಿ ಕರೆಯುತ್ತಾನೆ. ಯೇಸುವಿನಲ್ಲಿ ತನ್ನ ವಿಶ್ವಾಸವನ್ನು ವ್ಯಕ್ತಪಡಿಸುತ್ತಾನೆ. ಕಣ್ಣಿದ್ದ ಅನೇಕರು ಯೇಸುವನ್ನು ರಕ್ಷಕನೆಂದು ಗುರುತಿಸಲು ವಿಫಲರಾದರು. ಆದರೆ ಈ ಕುರುಡ ವಿಶ್ವಾಸಿಸಿ ದೇವರ ಕೃಪೆಗೆ ಪಾತ್ರನಾದ. ಆತನ ವಿಶ್ವಾಸ ಮತ್ತು ಪ್ರಾರ್ಥನೆ ಹಾದಿಯಲ್ಲಿ ಹೋಗುತ್ತಿದ್ದ ಯೇಸುವನ್ನು ತಡೆದು ನಿಲ್ಲಿಸಿತು. ನಾವು ಸಹ ಅದೇ ವಿಶ್ವಾಸದಿಂದ ಪ್ರಾರ್ಥನೆ ಮಾಡಿದರೆ ನಮ್ಮ ಪ್ರಾರ್ಥನೆಗೆ ದೇವರನ್ನು ತಡದುನಿಲ್ಲಿಸುವ ಶಕ್ತಿಯಿದೆ. ಸೌಖ್ಯದ ನಂತರ ಆ ಕುರುಡ ಯೇಸುವಿನ ಶಿಷ್ಯನಾದಂತೆ ನಾವು ಸಹ ಯೇಸುವಿನ ಹಿಂಬಾಲಕರಾಗಬೇಕಿದೆ.
===================
ಸ್ಟಾಟ್ಲೆಂಡಿನ ಸಂತ ಮಾರ್ಗರೆಟ್ (ಐಚ್ಛಿಕ ಸ್ಮರಣೆ)
ಸಂತ ಜೆತ್ರೂದ್, ಕನ್ಯೆ (ಐಚ್ಛಿಕ ಸ್ಮರಣೆ)
ಮೊದಲ ವಾಚನ: ಯೊವಾನ್ನನ ಪ್ರಕಟನೆ 1.1-4; 2.1-5
ಕೀರ್ತನೆ 1:1-4, 6. ಶ್ಲೋಕ.ಯೊವಾನ್ನನ ಪ್ರಕಟನೆ 2:7
ಯಾರು ಜಯಹೊಂದುತ್ತಾನೋ ಅವನು ಸೌಭಾಗ್ಯ ಪಡೆಯುತ್ತಾನೆ
ಶುಭಸಂದೇಶ: ಲೂಕ 18.35-43
==================
ಮೊದಲನೇ ವಾಚನ
ಯೊವಾನ್ನನ ಪ್ರಕಟನೆ 1.1-4; 2.1-5
1 : ದೇವರು ಯೇಸುಕ್ರಿಸ್ತರಿಗಿತ್ತ ಪ್ರಕಟನೆ ಇದು. ಅತಿ ಶೀಘ್ರದಲ್ಲಿಯೇ ಸಂಭವಿಸಲಿರುವ ಘಟನೆಗಳನ್ನು ತಮ್ಮ ದಾಸರಿಗೆ ತಿಳಿಯಪಡಿಸುವುದಕ್ಕಾಗಿ ಕ್ರಿಸ್ತಯೇಸುವಿಗೆ ಈ ಪ್ರಕಟನೆಯನ್ನು ದೇವರು ದಯಪಾಲಿಸಿದರು. ಕ್ರಿಸ್ತಯೇಸು ತಮ್ಮ ದೂತನನ್ನು ಕಳುಹಿಸಿ ತಮ್ಮ ದಾಸನಾದ ಯೊವಾನ್ನನಿಗೆ ಇವುಗಳನ್ನು ಪ್ರಕಟಿಸಿದರು.
2 : ಯೊವಾನ್ನನು ದೇವರ ಸಂದೇಶಕ್ಕೂ ಕ್ರಿಸ್ತೇಸು ತಿಳಿಸಿದ ಸತ್ಯಕ್ಕೂ ಸಾಕ್ಷಾತ್ ಸಾಕ್ಷಿಯಾಗಿದ್ದಾನೆ.
3 : ಈ ಪ್ರವಾದನಾ ಸಂದೇಶವನ್ನು ಓದುವವನು ಧನ್ಯನು; ಓದಿದ್ದನ್ನು ಕೇಳಿಸಿಕೊಳ್ಳುವವರೂ ಧನ್ಯರು ಮತ್ತು ಈ ಪ್ರವಾದನೆಯಲ್ಲಿ ಲಿಖಿತವಾಗಿರುವುದನ್ನು ಕೈಗೊಂಡು ನಡೆಯುವವರು ಸಹ ಧನ್ಯರು! ಏಕೆಂದರೆ, ಕಾಲ ಸನ್ನಿಹಿತವಾಯಿತು. ಶ್ರೀಸಭೆಗಳಿಗೆ ಶುಭಾಶಯಗಳು
4 : ಏಷ್ಯಾಸೀಮೆಯಲ್ಲಿರುವ ಏಳು ಸಭೆಗಳಿಗೆ ಯೊವಾನ್ನನೆಂಬ ನಾನು ಬರೆಯುವುದೇನೆಂದರೆ: ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,’ ಭವಿಷ್ಯತ್ಕಾಲದಲ್ಲಿ ‘ಬರುವಾತನೂ’ ಆದ ದೇವರಿಂದ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ!
2:1 : “ಎಫೆಸದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದಿರುವಾತನೂ ಏಳು ಚಿನ್ನದ ದೀಪಸ್ತಂಭಗಳ ನಡುವೆ ನಡೆದಾಡುವಾತನೂ ನೀಡುವ ಸಂದೇಶವಿದು:
2 : ನಾನು ನಿನ್ನ ಸುಕೃತ್ಯಗಳನ್ನು ಬಲ್ಲೆ. ನಿನ್ನ ಶ್ರಮಜೀವನವನ್ನು ಅರಿತು ಇದ್ದೇನೆ. ನಿನ್ನ ಸಹನಾಶಕ್ತಿಯನ್ನು ಮನಗಂಡಿದ್ದೇನೆ. ದುರ್ಜನರನ್ನು ನೀನು ಸಹಿಸಲಾರೆ ಎಂಬುದು ನನಗೆ ಗೊತ್ತು. ಪ್ರೇಷಿತರಲ್ಲದಿದ್ದರೂ ಪ್ರೇಷಿತರೆಂದು ಹೇಳಿಕೊಳ್ಳುವವರನ್ನು ನೀನು ಪರಿಶೋಧಿಸಿರುವೆ. ಅವರು ಸುಳ್ಳುಗಾರರೆಂಬುದನ್ನು ಕಂಡುಹಿಡಿದಿರುವೆ.
3 : ಹೌದು, ಸಹನಾಶಕ್ತಿ ನಿನಗಿದೆ. ಬೇಸರಗೊಳ್ಳದೆ ನನ್ನ ಹೆಸರಿನ ನಿಮಿತ್ತ ನೀನು ಕಷ್ಟಸಂಕಟಗಳನ್ನು ತಾಳಿಕೊಂಡೆ.
4 : ಆದರೂ ನಿನ್ನ ಮೇಲೆ ಹೊರಿಸಬೇಕಾದ ಆಪಾದನೆ ಒಂದಿದೆ: ಮೊದಲು ನಿನಗೆ ನನ್ನ ಮೇಲಿದ್ದ ಪ್ರೀತಿ ಈಗಿಲ್ಲ.
5 : ಆದುದರಿಂದ ನೀನು ಹೇಗೆ ಪತನಹೊಂದಿದೆ ಎಂಬುದನ್ನು ಜ್ಞಾಪಿಸಿಕೋ. ಪಶ್ಚಾತ್ತಾಪಪಟ್ಟ ಪಾಪಕ್ಕೆ ವಿಮುಖನಾಗು. ನೀನು ಮೊದಲು ಮಾಡಿದ ಸುಕೃತ್ಯಗಳನ್ನು ಸಾಧಿಸು. ನೀನು ಪಾಪಕ್ಕೆ ವಿಮುಖನಾಗದೆ ಹೋದರೆ, ನಾನು ನಿನ್ನ ಬಳಿಗೆ ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದು ಹಾಕುತ್ತೇನೆ.
===================
ಕೀರ್ತನೆ
ಕೀರ್ತನೆ 1:1-4, 6. ಶ್ಲೋಕ.ಯೊವಾನ್ನನ ಪ್ರಕಟನೆ 2:7
ಶ್ಲೋಕ:ಯಾರು ಜಯಹೊಂದುತ್ತಾನೋ
ಅವನು ಸೌಭಾಗ್ಯ ಪಡೆಯುತ್ತಾನೆ||
1 : ದುರ್ಜನರ ಆಲೋಚನೆಯಂತೆ ನಡೆಯದೆ /
ಪಾಪಾತ್ಮರ ಪಥದಲಿ ಕಾಲೂರದೆ /
ಧರ್ಮನಿಂದಕರ ಕೂಟದಲಿ ಕೂರದೆ //
2 : ಪ್ರಭುವಿನ ಧರ್ಮಶಾಸ್ತ್ರದಲಿ
ಹರ್ಷಗೊಳ್ಳುವವನಾರೋ - ಅವನೇ ಧನ್ಯನು/
ಹಗಲಿರುಳೆನ್ನದೆ ಅದನೆ ಧ್ಯಾನಿಸು ತಿರುವವನಾರೋ
- ಅವನೇ ಧನ್ಯನು //
3 : ನದಿಯ ಬದಿಯಲೇ ಬೆಳೆದಿಹ ಮರದಂತೆ /
ಸಕಾಲಕೆ ಫಲವೀವ ವೃಕ್ಷದಂತೆ /
ಎಲೆಬಾಡದೆ ಪಸಿರಿರುವ ತರುವಂತೆ /
ಸಿಗುವುದು ಅವನ ಕಾರ್ಯಗಳಿಗೆ ಸಫಲತೆ //
4 : ದುರುಳರಾದರೊ ತೂರಿ ಹೋಗುವರು /
ಬಿರುಗಾಳಿಗೆ ತರಗೆಲೆಯಾಗುವರು //
6 : ಸಜ್ಜನರ ಮಾರ್ಗಕ್ಕಿದೆ ಪ್ರಭುವಿನ ಪಾಲನ /
ದುರ್ಜನರ ಮಾರ್ಗಕ್ಕಿದೆ ಸಂಪೂರ್ಣ ವಿನಾಶನ //
===================
ಶುಭಸಂದೇಶ
ಲೂಕ 18.35-43
35 : ಯೇಸುಸ್ವಾಮಿ ಜೆರಿಕೊ ಪಟ್ಟಣವನ್ನು ಸಮೀಪಿಸುತ್ತಿದ್ದಾಗ ಕುರುಡನೊಬ್ಬನು ದಾರಿಯ ಪಕ್ಕದಲ್ಲಿ ಕುಳಿತು ಭಿಕ್ಷೆ ಬೇಡುತ್ತಿದ್ದನು.
36 : ಜನಸಂದಣಿಯ ಶಬ್ದವನ್ನು ಆಲಿಸಿ, ಅದೇನೆಂದು ವಿಚಾರಿಸಿದನು.
37 : “ನಜರೇತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾರೆ,” ಎಂದು ಅವನಿಗೆ ತಿಳಿಸಲಾಯಿತು.
38 : ಕೂಡಲೇ ಅವನು, “ಯೇಸುವೇ, ದಾವೀದ ಕುಲಪುತ್ರರೇ, ನನಗೆ ದಯೆತೋರಿ,” ಎಂದು ಗಟ್ಟಿಯಾಗಿ ಕೂಗಿಕೊಂಡನು.
39 : ಮುಂದೆ ಹೋಗುತ್ತಿದ್ದವರು, “ಸುಮ್ಮನಿರು” ಎಂದು ಅವನನ್ನು ಗದರಿಸಿದರು. ಅವನಾದರೋ, “ದಾವೀದ ಕುಲಪುತ್ರರೇ, ನನಗೆ ದಯೆತೋರಿ” ಎಂದು ಮತ್ತಷ್ಟು ಗಟ್ಟಿಯಾಗಿ ಕೂಗಿಕೊಂಡನು.
40 : ಇದನ್ನು ಕೇಳಿ ಯೇಸು, ಅಲ್ಲೇ ನಿಂತು, ಅವನನ್ನು ತಮ್ಮ ಬಳಿಗೆ ಕರೆದುತರುವಂತೆ ಅಪ್ಪಣೆಮಾಡಿದರು.
41 : ಅವನು ಹತ್ತಿರಕ್ಕೆ ಬಂದಾಗ, “ನನ್ನಿಂದ ನಿನಗೇನಾಗಬೇಕು?” ಎಂದು ಕೇಳಲು ಅವನು, “ಸ್ವಾವಿೂ, ನನಗೆ ಕಣ್ಣು ಕಾಣುವಂತೆ ಮಾಡಿ,” ಎಂದು ಪ್ರಾರ್ಥಿಸಿದನು.
42 : ಯೇಸು ಅವನಿಗೆ, “ದೃಷ್ಟಿಯನ್ನು ಪಡೆ; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಮಾಡಿದೆ,” ಎಂದರು.
43 : ಆ ಕ್ಷಣವೇ ಅವನಿಗೆ ದೃಷ್ಟಿಬಂದಿತು. ದೇವರನ್ನು ಸ್ತುತಿಸುತ್ತಾ ಅವನೂ ಯೇಸುವನ್ನು ಹಿಂಬಾಲಿಸಿದನು. ಇದನ್ನು ನೋಡಿದ ಜನರೆಲ್ಲರೂ ದೇವರನ್ನು ಕೊಂಡಾಡಿದರು.
==================
ಚಿಂತನೆ
ಜೆರಿಕೊ ಪಟ್ಟಣದಲ್ಲಿ ಯೇಸು ಕುರುಡನಿಗೆ ದೃಷ್ಟಿದಾನ ಮಾಡುತ್ತಾರೆ. ಜೆರಿಕೊ ಎಂದರೆ `ಪರಿಮಳ’ ಎಂದರ್ಥ. ಈ ಕುರುಡನು ಯೇಸುವನ್ನು ದಾವೀದ ಕುಲಪುತ್ರರೇ ಎಂದು ಸಂಬೋದಿಸುತ್ತಾನೆ. ಈ ಬಿರುದು ರಕ್ಷಕನಿಕೆ ನೀಡಲಾಗಿದೆ. ರಕ್ಷಕನು ಬಂದು ನಮ್ಮನ್ನು ರೋಮನ್ನರ ಅಧೀನದಿಂದ ಬಿಡುಗಡೆ ಮಾಡುವನೆಂದು ಜನರು ನಂಬಿದ್ದರು. ಬಹುಶಃ ಯೇಸುವಿನ ಅದ್ಬುತಗಳ ಬಗ್ಗೆ ಆಲಿಸಿದ್ದ ಕುರುಡನು ಗಟ್ಟಿಯಾಗಿ ಯೇಸುವನ್ನು ಕೂಗಿ ಕರೆಯುತ್ತಾನೆ. ಯೇಸುವಿನಲ್ಲಿ ತನ್ನ ವಿಶ್ವಾಸವನ್ನು ವ್ಯಕ್ತಪಡಿಸುತ್ತಾನೆ. ಕಣ್ಣಿದ್ದ ಅನೇಕರು ಯೇಸುವನ್ನು ರಕ್ಷಕನೆಂದು ಗುರುತಿಸಲು ವಿಫಲರಾದರು. ಆದರೆ ಈ ಕುರುಡ ವಿಶ್ವಾಸಿಸಿ ದೇವರ ಕೃಪೆಗೆ ಪಾತ್ರನಾದ. ಆತನ ವಿಶ್ವಾಸ ಮತ್ತು ಪ್ರಾರ್ಥನೆ ಹಾದಿಯಲ್ಲಿ ಹೋಗುತ್ತಿದ್ದ ಯೇಸುವನ್ನು ತಡೆದು ನಿಲ್ಲಿಸಿತು. ನಾವು ಸಹ ಅದೇ ವಿಶ್ವಾಸದಿಂದ ಪ್ರಾರ್ಥನೆ ಮಾಡಿದರೆ ನಮ್ಮ ಪ್ರಾರ್ಥನೆಗೆ ದೇವರನ್ನು ತಡದುನಿಲ್ಲಿಸುವ ಶಕ್ತಿಯಿದೆ. ಸೌಖ್ಯದ ನಂತರ ಆ ಕುರುಡ ಯೇಸುವಿನ ಶಿಷ್ಯನಾದಂತೆ ನಾವು ಸಹ ಯೇಸುವಿನ ಹಿಂಬಾಲಕರಾಗಬೇಕಿದೆ.
===================

No comments:
Post a Comment